- Advertisement -
- Advertisement -
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನ ಇಡ್ಕಿದು ಇಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವಕ್ಕೆ ಸಕಲ ಸಿದ್ಧತೆ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಆಡಳಿತ ಮಂಡಳಿಯ ಪ್ರಮುಖರು ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಈ ವೇಳೆ ಖಾವಂದರು ಆರ್ಥಿಕ ಸಹಾಯ ಹಸ್ತ ಚಾಚಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಈ ವೇಳೆ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಕೆ.ಎಸ್. ಮುಕ್ಕುಡ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ರಾಜಾರಾಮ ಶೆಟ್ಟಿ, ಕೋಲ್ಪೆಗುತ್ತು, ಕ್ಷೇತ್ರದ ಅರ್ಚಕ ಗೋಪಾಲಕೃಷ್ಣ, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಫುಲ್ಲಾ ಚಂದ್ರ ಪಿಜಿ ಕೋಲ್ಪೆ, ಕಿರಣ್ ಬೈಪದವು ಉಪಸ್ಥಿತರಿದ್ದರು.
ದಿನಾಂಕ 03-01-2023 ರಿಂದ 08-01-2023 ರವರೆಗೆ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
- Advertisement -