Sunday, April 28, 2024
spot_imgspot_img
spot_imgspot_img

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಶ ಬಲಿ, ತುಲಾಭಾರ ಸೇವೆ

- Advertisement -G L Acharya panikkar
- Advertisement -
vtv vitla

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಡಿ.28ರ ವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಎರಡನೇ ದಿನವಾದ ಡಿ.27ರಂದು ಬೆಳಗ್ಗೆ ೬ಗಂಟೆಯಿಂದ ವಿವಿಧ ಭಜನಾ ತಂಡಗಳಿಂದ ಅರ್ಧ ಏಕಾಹ ಭಜನೆ ಆರಂಭಗೊಂಡಿತು.

ಬೆಳಗ್ಗೆ ಆಶ್ಲೇಶ ಬಲಿ ಪ್ರಾರಂಭಗೊಂಡಿತು, ಮಧ್ಯಾಹ್ನ ತುಲಾಭಾರ ಸೇವೆಯ ಬಳಿಕ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕೆ.ಎಸ್. ಮುಕ್ಕುಡ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಗೌರವಾಧ್ಯಕ್ಷರಾದ ಎಂ.ಹೆಚ್. ರಮೇಶ್ ಭಟ್ ಮಿತ್ತೂರು, ಕಾರ್ಯಾಧ್ಯಕ್ಷರಾದ ದಿವಾಕರ ದಾಸ್ ನೇರ್ಲಾಜೆ, ಪ್ರಧಾನ ಕಾರ್ಯದರ್ಶಿ ಪ್ರಪುಲ್ಲಚಂದ್ರ ಪಿ.ಜಿ.ಕೋಲ್ಪೆ, ಉಪಾಧ್ಯಕ್ಷರಾದ ಈಶ್ವರ ಗೌಡ ನಾಯ್ತೋಟ್ಟು, ಎಂ.ಸುಧೀರ್ ಕುಮಾರ್‌ ಶೆಟ್ಟಿ,
ಕೋಶಾಧಿಕಾರಿ ವೆಂಕಟರಮಣ ಭಟ್ ಸೂರ್ಯ, ಕಾರ್ಯದರ್ಶಿ ಜಗದೀಶ್ ದೇವಸ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಜಯಕುಮಾರ್ ಗೌಡ ಸೂರ್ಯ, ಚಂದ್ರಶೇಖರ ಕಂಬಳಿ‌ ಅರ್ಕೆಚ್ಚಾರು, ದೇಜಪ್ಪ ಕೋಲ್ಪೆ, ವಿ.ಕೆ.ಕುಟ್ಟಿ ಉರಿಮಜಲು, ಉಷಾ ಮುಂಡ್ರಬೈಲು, ಶಶಿಪ್ರಭ ಮಿತ್ತೂರು ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರ್ಷಂಪ್ರತಿ ನಡೆಯುವ ತುಲಾಭಾರ ಸೇವೆಯಲ್ಲಿ ಒಟ್ಟು 39ಜನರು ತಮ್ಮ ಹರಕೆ ತೀರಿಸಿಕೊಂಡು ತುಲಾಭಾರ ಸೇವೆ ನಡೆಸಿದ್ದಾರೆ.

- Advertisement -

Related news

error: Content is protected !!