- Advertisement -
- Advertisement -
ಖಾಕಿ ಚಡ್ಡಿ ಸುಡುವ ಚಿತ್ರ ಪ್ರಕಟಿಸಿರುವ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ಗೆ ಬಿಜೆಪಿ, ಆರ್ಎಸ್ಎಸ್ ಹಾಗೂ ನೆಟ್ಟಿಗರು ತಿರುಗೇಟು ನೀಡಿದೆ.
ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ, ‘ಭಾರತ್ ಜೋಡೊ ಯಾತ್ರೆ’ಗೆ ಸಂಬಂಧಿಸಿದಂತೆ ಟ್ವೀಟ್ನಲ್ಲಿ, ಖಾಕಿ ಸುಡುವ ಚಿತ್ರವನ್ನು ಹಂಚಿದೆ. ದೇಶವನ್ನು ದ್ವೇಷದ ಸಂಕೋಲೆಯಿಂದ ಮತ್ತು ಬಿಜೆಪಿ-ಆರ್ಎಸ್ಎಸ್ ಹಾನಿಯಿಂದ ಮುಕ್ತಗೊಳಿಸಲು ನಾವು ಹಂತ ಹಂತವಾಗಿ ಗುರಿ ತಲುಪುತ್ತಿದ್ದೇವೆ ಎಂದು ಹೇಳಿತ್ತು.
ಇದಕ್ಕೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ. ಈ ಚಿತ್ರವು ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದ್ದು, ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ. ಈ ಹಿಂದೆ ಅವರು ಹಚ್ಚಿದ ಬೆಂಕಿ ದೇಶದ ಬಹುತೇಕ ಭಾಗವನ್ನು ಸುಟ್ಟು ಹಾಕಿದೆ. ರಾಜಸ್ಥಾನ ಹಾಗೂ ಛತ್ತೀಸಗಡದಲ್ಲಿ ಉಳಿದಿರುವ ಕೆಂಡ ಶೀಘ್ರದಲ್ಲೇ ಬೂದಿಯಾಗಲಿದೆ ಎಂದು ಹೇಳಿದ್ದಾರೆ.
- Advertisement -