Friday, April 26, 2024
spot_imgspot_img
spot_imgspot_img

ಗಂಡನ ಮನೆಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

- Advertisement -G L Acharya panikkar
- Advertisement -

ವಿಜಯಪುರ: 6 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಡನ ಮನೆಯ ಕಿರುಕುಳ ತಾಳದೆ ತವರು ಮನೆಗೆ ಬಂದ್ದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುದ್ದೇಬಿಹಾಳ ತಾಲೂಕು ಅರಸನಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಲಕ್ಷ್ಮೀ ಶಿವಪುತ್ರಪ್ಪ ಬೆಳ್ಳಿಕಟ್ಟಿ (20) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ.

6 ತಿಂಗಳ ಹಿಂದಷ್ಟೇ ಬಾಗಲಕೋಟ ಜಿಲ್ಲೆ ರಾಂಪೂರದ ಶೇಕಪ್ಪ ಕಾಖಂಡಕಿ ಎಂಬಾತನೊದಿಗೆ ಮದುವೆ ಮಾಡಿ ಕೊಡಲಾಗಿತ್ತು. 3-4 ತಿಂಗಳು ಗಂಡನ ಮನೆಯಲ್ಲಿದ್ದ ಲಕ್ಷ್ಮೀ ಕಿರುಕುಳ ತಾಳದೆ ತವರು ಮನೆಗೆ ಬಂದಿದ್ದಳು. ಮತ್ತೆ ಗಂಡನ ಮನೆಗೆ ಕಳಿಸಲು ತವರು ಮನೆಯವರು ಮುಂದಾದಾಗ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ, ಪಿಎಸ್‌ಐ ರೇಣುಕಾ ಜಕನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!