Sunday, May 19, 2024
spot_imgspot_img
spot_imgspot_img

‘ಗಡಿ ವಿವಾದವನ್ನು ಬಗೆಹರಿಸಲು ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು’- ಅಮಿತ್ ಶಾ

- Advertisement -G L Acharya panikkar
- Advertisement -

ನವದೆಹಲಿ: ಬೆಳಗಾವಿ ಗಡಿ ವಿವಾದವನ್ನು ಬಗೆಹರಿಸಲು ಶೀಘ್ರದಲ್ಲೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮಹಾ ಸಿಎಂ ಮತ್ತು ಕರ್ನಾಟಕ ಸಿಎಂಗಳ ನಡುವೆ ನಡೆದ ಸಭೆಯಲ್ಲಿ ಉಭಯ ನಾಯಕರುಗಳಿಂದ ಮಾಹಿತಿಯನ್ನು ಪಡೆದುಕೊಂಡು ನಂತರ ಮಾತನಾಡಿದ ಅವರು, ಬೆಳಗಾವಿ ಗಡಿ ವಿಚಾರದಲ್ಲಿ ಯಾವುದೇ ಗಡಿಬಿಡಿ ಬೇಡ ಅಲ್ಲಿವರೆಗೂ ಸುಮ್ಮನೆ ಇರಿ ಎಂದು ಸೂಚನೆ ನೀಡಿದ್ದು, ಬೆಳಗಾವಿ ಗಡಿ ವಿವಾದವನ್ನು ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು ಎಂದರು.

ಇನ್ನು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಮಸ್ಯೆಗಳನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ. ಗಡಿಯಲ್ಲಿ ಶಾಂತಿಯನ್ನು ಸ್ಥಾಪಿಸಬೇಕಿದೆ. ನೀವೆಲ್ಲರೂ ಇದಕ್ಕೆ ಸಹಕರಿಸ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!