- Advertisement -
- Advertisement -


ಮುಂಬೈ: ನಗರದ ವೆರ್ಸೋವಾ ಜೆಟ್ಟಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಐವರು ಮಕ್ಕಳು ನೀರುಪಾಲಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಈ ಪೈಕಿ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಕೂಪರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಮೂವರು ಮಕ್ಕಳ ಪತ್ತೆಯಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.


- Advertisement -








