- Advertisement -
- Advertisement -
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಮತ್ತಲ್ಲಿದ್ದ ಯುವಕರ ಗುಂಪೊಂದು ಅಟ್ಟಹಾಸ ನಡೆಸಿದ್ದು ಸಾರ್ವಜನಿಕರು ಹೈರಾಣಾದ ಘಟನೆ ಬೆಂಗಳೂರಿನ ಹೆಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ವಿಗ್ನ ನಗರದಲ್ಲಿ ನಶೆಯಲ್ಲಿ ತೇಲಾಡುತ್ತಿದ್ದ ಯವಕರು ರಸ್ತೆಯಲ್ಲಿ ಹೋಗುತ್ತಿರುವವರನ್ನು ತಡೆದು ಬೈಕ್ ಸವಾರರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ ಘಟನೆಯಿಂದ ಬೆಚ್ಚಿಬಿದ್ದ ಬೆಂಗಳೂರಿನ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ಚೆಲ್ಲಾಟದ ವಿಡಿಯೋ ಶೇರ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
- Advertisement -