Friday, March 29, 2024
spot_imgspot_img
spot_imgspot_img

ಗುಂಡು ಹಾರಿಸಿ ನಾಲ್ವರು ಕೊಲೆ ಆರೋಪಿಗಳ ಬಂಧನ!!

- Advertisement -G L Acharya panikkar
- Advertisement -

ಬೆಂಗಳೂರು(ನ.02): ಬೆಂಗಳೂರಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ನಾಲ್ವರು ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಗೋಪಿ, ಗಂಗಾ, ಬಸವ ಮತ್ತು ಅನಂತ ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಇನ್ಸ್ ಪೆಕ್ಟರ್ ಮತ್ತು ಸರ್ಜಾಪುರ ಎಸ್ ಐ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

ಆರೋಪಿಗಳನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಅವರು ಹಲ್ಲೆ ನಡೆಸಲು ಮುಂದಾದರು. ಈ ಸಂದರ್ಭದಲ್ಲಿ ಸ್ವಯಂ ರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿನೀತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಕೆಲವು ದಿನಗಳ ಹಿಂದೆ ದುಷ್ಕರ್ಮಿಗಳು ವಿನೀತ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ತೆರಳಿದ್ದರು.

ಈ ವೇಳೆ ಪೇದೆಗಳಾದ ಇರ್ಫಾನ್ ಮತ್ತು ನಾಗರಾಜ್ ಮೇಲೆ ಹಲ್ಲೆಗೆ ಮುಂದಾಗಿದ್ದ ಅನಂತ್ ಹಾಗೂ ಬಸವನ ಮೇಲೆ ಅತ್ತಿಬೆಲೆ ಇನ್‌ಸ್ಪೆಕ್ಟರ್ ಸತೀಶ್, ಸರ್ಜಾಪುರ ಎಸ್ಐ ಹರೀಶ್ ಫೈರಿಂಗ್ ಮಾಡಿದ್ದಾರೆ. ಇತ್ತ ಪೇದೆಗಳಾದ ಮಹೇಶ್ ಮತ್ತು ಸುರೇಶ್ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದ ಗೋಪಿ, ಗಂಗಾನ ಮೇಲೆ ಆನೇಕಲ್ ಡಿವೈಎಸ್ಪಿ ಮಹಾದೇವ್ ಮತ್ತು ಆನೇಕಲ್ ಇನ್‌ಸ್ಪೆಕ್ಟರ್ ಕೃಷ್ಣ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!