- Advertisement -
- Advertisement -


ಕಾಸರಗೋಡು: ಗುಂಡೇಟು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ.
ಕರಿಚ್ಚೇರಿ ಯ ಮಾಧವನ್ (65) ಮೃತಪಟ್ಟವರು. ಹಲಸು ಕೊಯ್ಯಲು ಹಿತ್ತಿಲಿಗೆ ತೆರಳಿದ್ದ ಮಾಧವನ್ ರವರು ನೆಲದಲ್ಲಿಟ್ಟಿದ್ದ ಕೋವಿಯನ್ನು ಮೆಟ್ಟಿದಾಗ ಗುಂಡು ಕಾಲಿಗೆ ತಗಲಿದೆ.

ಕಾಡುಹಂದಿಗೆ ಗುರಿ ಇಟ್ಟು ಈ ಕೋವಿಯನ್ನು ಪರಿಸರವಾಸಿಯೊಬ್ಬರು ಹಿತ್ತಿಲಿನಲ್ಲಿ ತಂದಿಟ್ಟಿದ್ದರು ಎನ್ನಲಾಗಿದೆ. ಘಟನೆ ನಡೆದ ಗಂಟೆಗಳ ಬಳಿಕ ಇದು ಮನೆಯವರ ಗಮನಕ್ಕೆ ಬಂದಿದೆ . ಕೂಡಲೇ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ . ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- ಸುಳ್ಳು ಸುದ್ದಿ ಹರಡಿದವರ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ
- ಜೀವಂತ ಮಹಿಳೆಗೆ ಮರಣ ಪ್ರಮಾಣ ಪತ್ರ: ಪಂಚಾಯತ್ ನಿರ್ಲಕ್ಷ್ಯಕ್ಕೆ ಬಡ ಕುಟುಂಬ ಬೀದಿಪಾಲು-ಪಿಂಚಣಿ, ಗೃಹಲಕ್ಷ್ಮಿ, ಅನ್ನಭಾಗ್ಯ ಸೌಲಭ್ಯ ಸ್ಥಗಿತ; ನ್ಯಾಯಕ್ಕಾಗಿ ಕುಟುಂಬದ ಅಳಲು
- ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಯಲ್ಲಿಯೇ ತುಂಬಿದೆ ನೀರು- ಅವೈಜ್ಞಾನಿಕ ಕಾಮಗಾರಿಗೆ ನಿದರ್ಶನ
- ಶಾಲಾ ಆವರಣಕ್ಕೆ ಬಂದ ಕಾಡಾನೆ: ವಿದ್ಯಾರ್ಥಿಗಳಲ್ಲಿ ಆತಂಕ – ಇಟಿಎಫ್ ಅಧಿಕಾರಿಯ ತ್ವರಿತ ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ
- ವಿಟ್ಲ ಜೇಸೀಸ್ ಶಾಲೆಯಲ್ಲಿ ‘ಫ್ರೆಶರ್ಸ್ ಡೇ’ ಸಂಭ್ರಮ



- Advertisement -








