Saturday, May 4, 2024
spot_imgspot_img
spot_imgspot_img

ಗೂಡ್ಸ್‌ ವಾಹನ ಮತ್ತು ಬೈಕ್ ಭೀಕರ ಅಪಘಾತ; ಅಂತ್ಯಕ್ರಿಯೆಗೆ ಹೊರಟ ಮೂವರು ಮಸಣಕ್ಕೆ

- Advertisement -G L Acharya panikkar
- Advertisement -

ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಒಂದೇ ಬೈಕ್‌ ನಲ್ಲಿ ಸಂಚರಿಸುತ್ತಿದ್ದ ಮೂವರು ಸಾವಿಗೀಡಾದ ಘಟನೆ ನಡೆದಿದೆ. ರಾಯಚೂರಿನ ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಈಚರ್ ಗೂಡ್ಸ್ ಕ್ಯಾಂಟರ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ನಡೆದಿದೆ. ಇದರಿಂದ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾದ ಬಸವರಾಜ್ (45), ಆತನ ಮಗ ನರೇಶ್ (8) ಹಾಗೂ ಸಂಬಂಧಿ ಭೀಮವ್ವ (40) ಮೃತ ದುರ್ದೈವಿಗಳು .ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದ ಮೂವರು ಈ ದುರಂತದಿಂದ ಸಾವಿಗೀಡಾಗಿದ್ದಾರೆ.

ರಾಯಚೂರು ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಅತಿ ವೇಗದಲ್ಲಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ‍ ಗೆ ಡಿಕ್ಕಿ ಹೊಡೆದಿದೆ . ಡಿಕ್ಕಿ ರಭಸಕ್ಕೆ ಕ್ಯಾಂಟರ್ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ . ಅಪಘಾತದಿಂದ ಮೂವರ ಮೃತದೇಹಗಳು ಜಮೀನಿನಲ್ಲಿ ಬಿದ್ದಿವೆ . ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ . ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Related news

error: Content is protected !!