Friday, May 17, 2024
spot_imgspot_img
spot_imgspot_img

ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್‌ಗೆ ಡಿಕ್ಕಿ ; ಸವಾರ ಮೃತ್ಯು

- Advertisement -G L Acharya panikkar
- Advertisement -

ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.

ಚಿಕ್ಕಗಂಡಸಿ ಗ್ರಾಮದ ರಮೇಶ್ (45) ಮೃತರು. ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೆರಳುತ್ತಿದ್ದರು. ಈ ವೇಳೆ ಗೃಹ ಸಚಿವರಿಗೆ ಎಸ್ಕಾರ್ಟ್ ಮಾಡುತ್ತಿದ್ದ ಕೆ.ಎ. 13 ಜಿ 1467 ಸಂಖ್ಯೆ ಪೊಲೀಸ್‌ ವಾಹನ ಬೈಕ್‌ಗೆ ಡಿಕ್ಕಿಯಾಗಿ ಸವಾರ ರಮೇಶ್ ಮೃತಪಟ್ಟಿದ್ದಾರೆ.

ಅಪಘಾತದ ವಿಷಯ ತಿಳಿದರೂ ವಾಹನ ನಿಲ್ಲಿಸದೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸವಾರ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

- Advertisement -

Related news

error: Content is protected !!