- Advertisement -
- Advertisement -
ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಧೂಪದಾಳ ಪ್ರವಾಸಿ ಮಂದಿರ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.
ಮೃತರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ನಿವಾಸಿಗಳು ಘಟಪ್ರಭಾ ಬಾರ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 6 ಜನ ಸ್ನೇಹಿತರು ಸೇರಿ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ ವೇಳೆ 6 ಜನ ಸ್ನೇಹಿತರ ಪೈಕಿ ನಾಲ್ವರು ನದಿಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಇದೀಗ 4 ಮಂದಿಯ ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್ ಠಾಣಾ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.
- Advertisement -