- Advertisement -
- Advertisement -
ಗೋವಾ: ಕಣಕೋಣದಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ(77) ಇಂದು ವಿಧಿವಶರಾಗಿದ್ದಾರೆ.
ಹೃದಯಾಘಾತದಿಂದಾಗಿ ಗೋವಾದಲ್ಲಿ ಇಂದು ಬೆಳಗ್ಗಿನ ಜಾವ ಸ್ವಾಮೀಜಿ ವಿಧಿವಶರಾಗಿದ್ದಾರೆ. ಶ್ರೀಗಳು ಶಿರಶಿಯಲ್ಲೂ ಅಪಾರ ಶಿಷ್ಯವೃಂದವನ್ನ ಹೊಂದಿದ್ದರು. 2010 ರಲ್ಲಿ ಶ್ರೀಗಳ ಚಾತುರ್ಮಾಸ್ಯ ಮತ್ತು 70 ನೇ ವರ್ಷದ ‘ಸಪ್ತತಿ’ ಕಾರ್ಯಕ್ರಮ ಶಿರಸಿ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿತ್ತು.
ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿಗಳು ವಿಧಿವಶ ಹಿನ್ನೆಲೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
- Advertisement -