- Advertisement -
- Advertisement -
ಪಂಚರಾಜ್ಯಗಳ ವಿಧಾನ ಸಭಾ ಚುನವಾಣೆಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಇನ್ನು ಗೋವಾದಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲದ ಹೋರಾಟ ನಡೆಸುತ್ತಿದೆ. 40 ಕ್ಷೇತ್ರಗಳ ಮತೆಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಗೋವಾದ ಪಣಜಿಯ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ 19 ಕ್ಷೇತ್ರಗಳ ಮತ ಎಣಿಕೆ ನಡೆದರೆ ಮಡಗಾಂವ್ನಲ್ಲಿ ಇನ್ನುಳಿದ 21 ಕ್ಷೇತ್ರಗಳ ಮತಎಣಿಕೆ ಕಾರ್ಯ ನಡೆಯುತ್ತಿದೆ.
ಬಿಜೆಪಿ 21, ಕಾಂಗ್ರೆಸ್ 13 ಕ್ಷೇತ್ರ ಹಾಗೂ ಇತರೆ 05 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆಮ್ ಆದ್ಮಿ ಪಕ್ಷ ಈ ಬಾರಿ ಖಾತೆ ತೆರೆಯುವ ಲಕ್ಷಣ ಕಾಣಿಸಿಕೊಂಡಿದೆ. ಸರ್ಕಾರ ರಚಿಸಲು ಕಸರತ್ತು ಆರಂಭಿಸಿದ ಬಿಜೆಪಿ, ಸಿ. ಟಿ. ರವಿ, ದೇವೇಂದ್ರ ಫಡ್ನವೀಸ್ ರಸಹ್ಯ ಸಭೆ ಆರಂಭವಾಗಿದೆ. ಅತ್ತ ಮಡ್ಗಾವ್ನ ಹೊಟೇಲ್ವೊಂದರಲ್ಲಿ ಕಾಂಗ್ರೆಸ್ನ ಎಲ್ಲ ಅಭ್ಯರ್ಥಿಗಳೊಂದಿಗೆ ಕಾಂಗ್ರೆಸ್ ನಾಯಕರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಭಾಗಿಯಾಗಿದ್ದಾರೆ ಎಂಬ ವರದಿಗಳು ಲಭ್ಯವಾಗಿದೆ.
- Advertisement -