Friday, April 26, 2024
spot_imgspot_img
spot_imgspot_img

ಗ್ಯಾಸ್ ಗೀಸರ್ ಆನ್ ಮಾಡಿ ಸ್ನಾನಕ್ಕೆ ಹೋದ ಮಹಿಳೆ ದಾರುಣ ಸಾವು!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಬೆಂಗಳೂರು: ಮಾದನಾಯಕನಹಳ್ಳಿಯ ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿ ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಸ್ನಾನಕ್ಕೆ ತೆರಳಿದ ಮಹಿಳೆ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆ ಮೂಲತಃ ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನ ಅರಕೆರೆ ಗ್ರಾಮದ ಕವಿತಾ (22)ಎನ್ನಲಾಗಿದೆ. ಕವಿತಾಗೆ ನಾಲ್ಕು ವರ್ಷಗಳ ಹಿಂದೆ ಪ್ರದೀಪ್​ ಜತೆ ವಿವಾಹ ಮಾಡಿಸಲಾಗಿದ್ದು, ದಂಪತಿಗೆ 3 ವರ್ಷದ ಮಗಳಿದ್ದಾಳೆ.

ಈಕೆ ಇಂದು ಗ್ಯಾಸ್ ಗೀಸರ್ ಆನ್ ಮಾಡಿಕೊಂಡು ಸ್ನಾನ ಮಾಡಲು ತೆರಳಿದ್ದಾರೆ. ಆದರೆ ಎಷ್ಟು ಹೊತ್ತಾದರೂ ಹೊರಗೆ ಬರದಿದ್ದಾಗ ಪತಿ ಕಿಟಕಿಯಲ್ಲಿ ಇಣುಕಿ ನೋಡಿದಾಗ ಪತ್ನಿ ನೆಲದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡುಬಂದಿದೆ.

ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ದಂಪತಿಗಳ ಮಧ್ಯೆ ಆಗಾಗ ಜಗಳ ಆಗುತ್ತಿತ್ತು ಎಂಬ ಆರೋಪ ಇದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಯುತ್ತಿದ್ದಾರೆ.

vtv vitla
- Advertisement -

Related news

error: Content is protected !!