Sunday, May 5, 2024
spot_imgspot_img
spot_imgspot_img

ಗ್ಯಾಸ್ ಸಿಲಿಂಡರ್ ಸ್ಟೋಟ; ಮನೆಯಲ್ಲಿದ್ದ ಏಳು ಮಂದಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಬೆಂಗಳೂರು: ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮನೆಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಮನೆಯಲ್ಲಿದ್ದಂತ ೭ ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಜಿಗಣಿಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಮಂಜುನಾಥ್ ರೆಡ್ಡಿ ಅವರ ಮನೆಯಲ್ಲಿ ಉತ್ತರ ಭಾರತ ಮೂಲದ ಏಳು ಕಾರ್ಮಿಕರು ೨ ವರ್ಷಗಳಿಂದ ಬಾಡಿಗೆ ಇದ್ದರು ಎನ್ನಲಾಗಿದೆ.

ಸಿಲಿಂಡರ್ ಬ್ಲಾಸ್ಟ್ ನಿಂದಾಗಿ ಮನೆ ಕೂಡ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಕಾರ್ಮಿಕರಾದ ಜಗದೀಶ್, ಶಾಂತಿಬೈ, ಪ್ರಕಾಶ್, ಜೈಮುಲ್, ಮಂಜು ಹಾಗೂ ವಲ್ಲಿ ಗಾಯಗೊಂಡ ಕಾರ್ಮಿಕರು. ಇವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಗಣಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!