- Advertisement -
- Advertisement -
ಬೆಂಗಳೂರು: ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮನೆಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಮನೆಯಲ್ಲಿದ್ದಂತ ೭ ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಜಿಗಣಿಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಮಂಜುನಾಥ್ ರೆಡ್ಡಿ ಅವರ ಮನೆಯಲ್ಲಿ ಉತ್ತರ ಭಾರತ ಮೂಲದ ಏಳು ಕಾರ್ಮಿಕರು ೨ ವರ್ಷಗಳಿಂದ ಬಾಡಿಗೆ ಇದ್ದರು ಎನ್ನಲಾಗಿದೆ.
ಸಿಲಿಂಡರ್ ಬ್ಲಾಸ್ಟ್ ನಿಂದಾಗಿ ಮನೆ ಕೂಡ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಕಾರ್ಮಿಕರಾದ ಜಗದೀಶ್, ಶಾಂತಿಬೈ, ಪ್ರಕಾಶ್, ಜೈಮುಲ್, ಮಂಜು ಹಾಗೂ ವಲ್ಲಿ ಗಾಯಗೊಂಡ ಕಾರ್ಮಿಕರು. ಇವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಗಣಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
- Advertisement -