- Advertisement -
- Advertisement -

ಈತನೊಬ್ಬ ರೌಡಿಶೀಟರ್..! ಅಂತೆಯೇ ಗ್ರಾಮ ಪಂಚಾಯತ್ ಸದಸ್ಯ ಕೂಡ ಹೌದು. ಇತ್ತೀಚಿಗೆ ಈತ ಪ್ರೇಮ ವಿವಾಹವಾಗಿದ್ದು ಭೀಕರವಾಗಿ ಹತ್ಯೆಯಾಗಿದ್ದಾನೆ..!
ಹುಬ್ಬಳ್ಳಿ ತಾಲ್ಲೂಕಿನ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೌಡಿಶೀಟರ್ ದೀಪಕ ಶಿವಾಜಿ ಪಟದಾರಿ (34) ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯನಾಳದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ಮನೆಗೆ ಹೊರಟಿದ್ದ ವೇಳೆ ದೀಪಕ್ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಕಲ್ಲಿನಿಂದ ತಲೆ ಹಾಗೂ ಮುಖಕ್ಕೆ ಜಜ್ಜಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ.

ಇತ್ತೀಚಿಗೆ ದೀಪಕ ಪ್ರೇಮ ವಿವಾಹ ಅಗಿದ್ದರು. ಜತೆಗೆ ಆಸ್ತಿ ವಿಚಾರವಾಗಿಯೂ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈಗಾಗಲೇ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -