- Advertisement -
- Advertisement -
ಬೆಂಗಳೂರು: ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಶಿವು (26) ಮೃತ ದುರ್ದೈವಿ. ಬಾವಿಗೆ ಗ್ರಿಲ್ ಅಳವಡಿಸುವ ವೇಳೆ ದುರಂತ ನಡೆದಿದ್ದು, ಯಾವುದೇ ಸುರಕ್ಷಾ ಕ್ರಮಗಳನ್ನು ಅನುಸರಿಸದೆ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಶಿವು ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸಗಾರನಾಗಿದ್ದಾರೆ. ಇವರಿಗೆ 15 ದಿನದ ಹಿಂದಷ್ಟೇ ಮಗುವೊಂದು ಜನಿಸಿದ್ದು, ಪತ್ನಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮನೆಯ ಪಕ್ಕದಲ್ಲಿಯೇ ಇದ್ದ ಬಾವಿ ಜಾಲರಿಯನ್ನು ದುರಸ್ತಿ ಮಾಡಲು ಮುಂದಾಗಿದ್ದ ಶಿವು ವೆಲ್ಡಿಂಗ್ ಕೆಲಸಕ್ಕೆ ಇಳಿದಿದ್ದರು. ಈ ವೇಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಅಲ್ಲೇ ಮೃತಪಟ್ಟಿದ್ದಾರೆ.
10 ವರ್ಷಗಳ ಹಿಂದೆಯೂ ಒಬ್ಬ ವ್ಯಕ್ತಿ ಇದೇ ಬಾವಿಗೆ ಬಿದ್ದು ಸತ್ತಿದ್ದ ಎಂದು ತಿಳಿದು ಬಂದಿದೆ. ಶಾಸಕರ ಕಡೆಯಿಂದ ದುರಸ್ತಿ ಕೆಲಸ ನಡೆಯುತ್ತಿತ್ತು. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -