Saturday, April 27, 2024
spot_imgspot_img
spot_imgspot_img

ಚಲಿಸುತ್ತಿದ್ದಾಗಲೇ ಧಗ ಧಗನೆ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರು

- Advertisement -G L Acharya panikkar
- Advertisement -

ವಿಜಯನಗರ: ಇಲ್ಲಿನ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಘಟನೆ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಹೊರ ಬಂದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಆಗಿಲ್ಲ. ವೀರಾಪುರ ಸರ್ವಿಸ್ ರಸ್ತೆಯ ಬಳಿ ನೋಡನೋಡುತ್ತಿದ್ದ ದಟ್ಟ ಹೊಗೆ ಆವರಿಸಿದ್ದು, ದಿಢೀರ್‌ ಆಗಿ ಕಾಣಿಸಿಕೊಂಡ ಬೆಂಕಿಯು ಧಗ ಧಗನೇ ಹೊತ್ತಿ ಉರಿಯತೊಡಗಿದೆ. ಇದರಿಂದ ಕ್ಷಣ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೈವೇ ಪೆಟ್ರೋಲಿಂಗ್ ಸಿಬ್ಬಂದಿ, ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಕೂಡ್ಲಿಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಾರಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂದು ಇನ್ನೂ ತಿಳಿದು ಬಂದಿಲ್ಲ.

- Advertisement -

Related news

error: Content is protected !!