- Advertisement -
- Advertisement -
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ.
ಮೆಟ್ರೋ ರೈಲುಗಳ ಮೇಲೆ ಕಲ್ಲುತೂರಾಟ ನಡೆದ ವರದಿಗಳ ಬೆನ್ನಲ್ಲೇ ಬೈಯ್ಯಪ್ಪನ ಹಳ್ಳಿ ರೈಲು ನಿಲ್ದಾಣದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ (ಕೊಯಂಬತ್ತೂರು-ಮುಂಬೈ) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರ ಪರಿಣಾಮ ರೈಲಿನಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರಿಗೆ ತಲೆಗೆ ಪೆಟ್ಟು ಬಿದ್ದಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಟಿಟಿಇ ಕಮರ್ಷಿಯಲ್ ಕಂಟ್ರೋಲ್ ರೂಮ್ ಗೆ ಮಾಹಿತಿ ರವಾನೆ ಮಾಡಿದ್ದು, ಗಾಯಗೊಂಡ ಪ್ರಯಾಣಿಕ ಮಹಿಳೆಗೆ ಚಿಕಿತ್ಸೆಯ ವ್ಯವಸ್ಥೆ ಮಾಡಲಾಯಿತು. ಈ ಸಮಸ್ಯೆಗೆ ಪರಿಹಾರ ಕಷ್ಟವಾಗಿದ್ದು, ಕಲ್ಲು ತೂರಾಟದಂತಹ ಘಟನೆಯಿಂದ ರೈಲಿನಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಈ ಘಟನೆಗಳು ಅಪಾಯಕಾರಿಯಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ.
- Advertisement -