Friday, May 3, 2024
spot_imgspot_img
spot_imgspot_img

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಯುವಕರಿಬ್ಬರ ದಾರುಣ ಅಂತ್ಯ

- Advertisement -G L Acharya panikkar
- Advertisement -

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊರಟ್ಟಿ ರೈಲು ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ.

ಕೊರಟ್ಟಿ ನಿವಾಸಿಗಳಾದ ಕೃಷ್ಣಕುಮಾರ್(17) ಮತ್ತು ಸಂಜಯ್ (16) ಮೃತಪಟ್ಟವರು.

ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿರುವ ಬಗ್ಗೆ ಅಂದಾಜಿಸಲಾಗಿದೆ. ಬೆಳಗ್ಗೆ 5 ಗಂಟೆ ವೇಳೆಗೆ ಯುವಕರಿಬ್ಬರ ಶವ ಪತ್ತೆಯಾದ ಬಳಿಕ ಘಟನೆ ಬಗ್ಗೆ ಗೊತ್ತಾಗಿದೆ.

ಈ ನಿಲ್ದಾಣದಲ್ಲಿ ಹೆಚ್ಚಿನ ರೈಲುಗಳು ನಿಲುಗಡೆಯಾಗುವುದಿಲ್ಲ. ಆದರೆ ನಿಧಾನಕ್ಕೆ ಚಲಿಸುತ್ತವೆ. ಹೀಗೆ ಚಲಿಸುತ್ತಿದ್ದ ರೈಲಿನಿಂದ ನಿಲ್ದಾಣದ ಫ್ಲಾಟ್‌ಫಾರ್ಮ್ ಮೇಲೆ ಯುವಕರು ಜಿಗಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಓರ್ವನ ತಲೆಗೆ ಗಂಭೀರ ಗಾಯವಾಗಿದ್ದು, ಮತ್ತೊಬ್ಬ ಫ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿ ಕೆಳಕ್ಕೆ ಬಿದ್ದಿದ್ದಾರೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!