- Advertisement -
- Advertisement -
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಖಾಸಗಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನದಲ್ಲಿ ಖಾಸಗಿ ವಿಧೇಯಕ ಮಂಡಿಸಲು ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜುಗೌಡ ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ಮತಾಂತರವನ್ನು ಕಾನೂನು ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾವನೆಯನ್ನು ಈ ವಿಧೇಯಕ ಒಳಗೊಳ್ಳಲಿದೆ. ಮತಾಂತರ ನಿಷೇಧ ಖಾಸಗಿ ವಿಧೇಯಕ ಮಂಡನೆ ಕುರಿತು ತುಳಸಿ ಮುನಿರಾಜು ಅವರು ವಿಧಾನ ಪರಿಷತ್ ಸಭಾಪತಿಗೆ ಸೂಚನೆಯನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.
- Advertisement -