- Advertisement -
- Advertisement -
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರುತಳ ಬಳಿ ನಡೆದಿದೆ. ಮೃತ ವ್ಯಕ್ತಿ ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ಎನ್ನಲಾಗಿದೆ.
5 ದಿನಗಳ ಹಿಂದೆ ನಾಗೇಶ್ ಅವರನ್ನು ಜೀಪಿನಲ್ಲಿ ಕರೆದುಕೊಂಡು ಹೋಗಿದ್ದ ಕೃಷ್ಣೇಗೌಡ ಎಂಬಾತನೇ ಕೊಲೆ ಮಾಡಿ, ಮಣ್ಣಿನಡಿ ಹೂತಿಟ್ಟು ಪೊಲೀಸರು, ಸ್ಥಳೀಯರ ಜೊತೆ ಸೇರಿಕೊಂಡು ಹುಡುಕಾಟದ ನಾಟಕವಾಡಿದ್ದ. ಆದರೆ, ಕೃಷ್ಣೇಗೌಡನೇ ಆತನಿಗೆ ಗುಂಡಿಟ್ಟು ಕೊಂದು ಚಾರ್ಮಾಡಿ ಅರಣ್ಯದ ಮಧ್ಯೆ ಹೂತು ಹಾಕಿದ್ದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಆಗಮಿಸಿದ ಬಾಳೂರು ಠಾಣೆ ಪೊಲೀಸರು ಹಾಗೂ ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ಮಣ್ಣಿನಲ್ಲಿ ಹೂತಿಟ್ಟಿದ್ದ ಶವವನ್ನು ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಕೃಷ್ಣೇಗೌಡ, ಉದಯ್, ಪ್ರದೀಪ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -