Friday, April 19, 2024
spot_imgspot_img
spot_imgspot_img

ಪ್ರವಾಸದ ಬಸ್ಸು ಪಲ್ಟಿ; ಐವರಿಗೆ ಗಾಯ

- Advertisement -G L Acharya panikkar
- Advertisement -
vtv vitla

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಹಿಂದಿರುಗುವಾಗ ಕಾಲೇಜು ಬಸ್‌ವೊಂದು ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡಕ್ಕೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ಬರುತ್ತಿದ್ದ ವೇಳೆ ಕಾಲೇಜು ವಾಹನ ಪಲ್ಟಿಯಾಗಿದೆ. ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಬಸ್‌ ಪಲ್ಟಿಯಾಗಿದೆ.

ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಹರೀಶ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಬಸ್‌ನಲ್ಲಿ ಪಿಕ್‌ನಿಕ್‌ಗೆ ಹೋಗಿದ್ದರು. ಬಸ್‌ನಲ್ಲಿ ಹತ್ತು ವಿದ್ಯಾರ್ಥಿಗಳು ಮಾತ್ರವೇ ಇದ್ದರು. ಬಣಕಲ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!