- Advertisement -
- Advertisement -
ಚಿಕ್ಕಮಗಳೂರು: ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರೊಬ್ಬರು ಹೆಚ್ಚೇನು ದಾಳಿಗೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ಎಸ್ಟೇಟ್ ನಲ್ಲಿ ನಡೆದಿದೆ. ಭೋಜೇಗೌಡ (74) ಮೃತ ದುರ್ದೈವಿ.
ಕಾಫಿತೋಟಕ್ಕೆ ಹೋದ ಸಂದರ್ಭದಲ್ಲಿ ಒಮ್ಮೆಲ್ಲೇ ನೂರಕ್ಕೂ ಅಧಿಕ ಹೆಚ್ಚೇನುಗಳು ದಾಳಿ ಮಾಡಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.
ಎಂ.ಎಸ್. ಭೋಜೇಗೌಡ 2ನೇ ಬಾರಿ ಕಾಫಿ ಮಂಡಳಿ ಅಧ್ಯಕ್ಷರಾಗಿದ್ದರು. ಕಳೆದ ಮಾರ್ಚ್ ನಲ್ಲಿ ಕಾಫಿ ಮಂಡಳಿ ಅಧ್ಯಕ್ಷ ಗಿರಿ ಕೊನೆಯಾಗಿತ್ತು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದರು ಎಂ.ಎಸ್. ಭೋಜೇಗೌಡ. ಹಾಗೇ ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು.ಒಮ್ಮೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದರು.
- Advertisement -