- Advertisement -
- Advertisement -
ಮಂಡ್ಯ: ಕವಲಂದೆ ಛೋಟಾ ಪಾಕಿಸ್ತಾನ ಎಂದು ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.
ಮಂಡ್ಯದಲ್ಲಿ ಮಾತನಾಡಿದ ಮುತಾಲಿಕ್, ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಬೇಕು. ನಮ್ಮ ದೇಶ, ರಾಜ್ಯದಲ್ಲಿದ್ದುಕೊಂಡು ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಒದ್ದು ಓಡಿಸಬೇಕು. ಘೋಷಣೆ ಕೂಗುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಸರ್ಕಾರಕ್ಕೆ ಗಂಡಸ್ತನವಿಲ್ಲ ಎಂದು ಗುಡುಗಿದರು.
ನಾಳೆಯಿಂದ ದೇವಾಲಯಗಳಲ್ಲಿ ಸುಪ್ರಭಾತ ಅಭಿಯಾನ ಆರಂಭವಾಗುತ್ತದೆ. ಪೊಲೀಸರು ತಡೆಯಲು ಮುಂದಾದರೆ ಸಂಘರ್ಷ ನಡೆಯುವುದು ನಿಶ್ಚಿತ. ಸುಪ್ರೀಂ ಕೋರ್ಟ್ ಆದೇಶವನ್ನು ಇವರು ಪಾಲನೆ ಮಾಡುತ್ತಿಲ್ಲ. ಸರ್ಕಾರ, ತಕ್ಷಣ ಮಸೀದಿಗಳಲ್ಲಿನ ಮೈಕ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
- Advertisement -