Saturday, June 28, 2025
spot_imgspot_img
spot_imgspot_img

ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

- Advertisement -
- Advertisement -

ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ಪುವೀಣ್ ನೆಟ್ಟಾರು ಪತ್ನಿ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶ ಪತ್ರವನ್ನು ಸ್ವೀಕರಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ನೂತನ ಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಆಸೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

astr

- Advertisement -

Related news

error: Content is protected !!