ಹೊನ್ನಾವರ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರೆ ಮಾರಿಮನೆಯ 21 ವರ್ಷದ ಗಗನ್ ರವಿ ನಾಯ್ಕ ಗೋವಾದ ಬೀಚ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ರಾಮನವಮಿ ದಿವಸ ಹೊನ್ನಾವರ ಜಾತ್ರೆಗೆ ಹೋಗುತ್ತೇನೆ ಎಂದು ಮನೆಯಿಂದ ಹೋಗಿದ್ದ. ಅಲ್ಲಿಂದ ಮೂರು ಜನ ಸ್ನೇಹಿತರೊಂದಿಗೆ ಮನೆಗೆ ತಿಳಿಸದೆ ಗೋವಾಗೆ ಹೋಗಿದ್ದ ಎನ್ನಲಾಗುತ್ತಿದೆ. ಗೋವಾ ಹೋದ ಮೇಲೆ ಬೇರೊಂದು ನಂಬರ್ ನಿಂದ ಮನೆಗೆ ಕಾಲ್ ಮಾಡಿ ಸಂಬಂಧಿಕರ ಮನೆಗೆ ಹೋಗುತ್ತೇನೆ ಎಂದು ಹೇಳಿದ್ದಾನೆ ಎಂದು ಸುದ್ದಿ ಕೇಳಿ ಬಂದಿದೆ. ಜೊತೆಗಿದ್ದ ಸ್ನೇಹಿತರು ವಾಪಾಸ್ ಬಂದರು ಈತ ಗೋವಾದಲ್ಲೇ ಇದ್ದ ಎಂದು ಸ್ನೇಹಿತರು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.
ಮನೆಗೆ ಬಾರದ ಮಗನನ್ನು ಮನೆಯವರು ಹುಡುಕಿ ಹೋದಾಗ ಮೃತ ಪಟ್ಟಿರುವುದು ಬೆಳಕಿಗೆ ಬಂದಿದೆ. ಗೋವಾ ಬಾದ್ ಮೋಲ್ ಬೀಚ್ ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹುಡುಗನ ಸಾವಿಗೆ ಕಾರಣವೇನು? ಜೊತೆಗಿದ್ದ ಸ್ನೇಹಿತರಿಗೆ ಈತ ಹೇಳಿದ್ದು ಏನು..? ನಿಜವಾಗ್ಲೂ ಅಲ್ಲಿ ನಡೆದಿದ್ದೇನು ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ.