Sunday, May 5, 2024
spot_imgspot_img
spot_imgspot_img

ಜೋಧಪುರದಲ್ಲಿ ಕಲ್ಲು ತೂರಾಟ, ಇಂಟರ್ನೆಟ್ ಸೇವೆ ಸ್ಥಗಿತ, ಕರ್ಫ್ಯೂ ಜಾರಿ

- Advertisement -G L Acharya panikkar
- Advertisement -

ಜೈಪುರ್: ಜೋಧಪುರದ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಕಲ್ಲು ತೂರಾಟ ನಡೆದು ನಾಲ್ವರು ಪೊಲೀಸರು ಗಾಯಗೊಂಡಿದ್ದು, ಜೋಧ್ ಪುರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜೋಧ್ ಪುರದ ಜಾಲೋರಿ ಗೇಟ್ ಪ್ರದೇಶದಲ್ಲಿ ಸೋಮವಾರ ಎರಡು ಕೋಮುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ನಂತರ ಹಲವಾರು ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆಸುವ ಮೂಲಕ ಹಿಂಸಾಚಾರಕ ನಡೆದಿದೆ.

ಇನ್ನು ಮುಂಜಾಗ್ರತಾ ಕ್ರಮವಾಗಿ ಉದಯ್ ಮಂದಿರ್, ನಾಗೋರಿ ಗೇಟ್, ಖಾಂಡಾ ಫಾಲ್ಸಾ, ಪ್ರತಾಪ್ ನಗರ್, ದೇವ್ ನಗರ್, ಸೂರ್ ನಗರ್ ಮತ್ತು ಸರ್ದಾರ್ ಪುರ್ ಪ್ರದೇಶದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.

vtv vitla
vtv vitla
- Advertisement -

Related news

error: Content is protected !!