ಕೇರಳ : ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಮೃತ ದುದೈರ್ವಿ.
ಆರೋಪಿಯನ್ನು ಗ್ರೀಷ್ಮಾ ಎಂದು ಗುರುತಿಸಲಾಗಿದ್ದು, ಈಕೆ ಶರೋನ್ ರಾಜ್ ಜೊತೆ ರಿಲೇಷನ್ ಶಿಪ್ ನಲ್ಲಿದ್ದಳು, ಅಲ್ಲದೇ ಜ್ಯೋತಿಷಿ ಒಬ್ಬರು ಗ್ರೀಷ್ಮಾ ಜಾತಕದ ಪ್ರಕಾರ, ಆಕೆಯ ಮೊದಲ ಪತಿ ಸಾಯುತ್ತಾನೆ ಎಂದು ಹೇಳಿದ್ದರು. ಇದರಿಂದ ಭಯಗೊಂಡು ಆತನೊಂದಿಗೆ ಬ್ರೇಕ್ ಮಾಡಿಕೊಳ್ಳಲು ಪ್ರಯತ್ನಿಸಿದಳು.
ಗ್ರೀಷ್ಮಾ ಮತ್ತು ಶರೋನ್ ಒಂದು ವರ್ಷದಿಂದ ರಿಲೇಷನ್ ಶಿಪ್ನಲ್ಲಿದ್ದರು. ಅಲ್ಲದೇ ಮನೆಯವರು ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಫೆಬ್ರವರಿಯಿಂದ ಗ್ರೀಷ್ಮಾ ಹಾಗೂ ಶರೋನ್ ನಡುವೆ ಕೆಲವು ಮನಸ್ತಾಪಗಳು ಪ್ರಾರಂಭವಾಯಿತು. ಹೀಗಿದ್ದರೂ ಇಬ್ಬರೂ ರಿಲೇಶನ್ ಶಿಪ್ ಮಂದುವರೆಸಿದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಗಿದ್ದರಿಂದ ಶರೋನ್ ಅನ್ನು ಬಿಡುವ ಸಲುವಾಗಿ, ವಿಷ ನೀಡಿ ಕೊಲ್ಲಲು ನಿರ್ಧರಿಸಿದಳು. ಮೊದಲಿಗೆ ಸಮಾಧಾನದಿಂದ ಮೃದು ಸ್ವಭಾವದಿಂದ ಬ್ರೇಕ್ ಅಪ್ ಮಾಡಿಕೊಳ್ಳೋಣ ಎಂದು ತಿಳಿಸಿದಳು. ಆದರೆ ಇದಕ್ಕೆ ಶರೋನ್ ರಾಜ್ ನಿರಾಕರಿಸಿದ್ದಾನೆ.
ಕೊಲೆ ಮಾಡಲು ಮೊದಲೇ ಪ್ರೀ ಪ್ಲಾನ್ ಮಾಡಿದ್ದ ಗ್ರೀಷ್ಮಾ ಅಕ್ಟೋಬರ್ 14 ರಂದು ಶರೋನ್ ರಾಜ್ ಅನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಕಷಾಯದೊಂದಿಗೆ ಕೀಟನಾಶಕವನ್ನು ಬೆರೆಸಿ ಕುಡಿಸಿದ್ದಾಳೆ. ಇದಾದ ಬಳಿಕ ಪ್ರಿಯಕರ ವಾಂತಿ ಮಾಡಿಕೊಳ್ಳಲು ಆರಂಭಿಸಿ, ಬಳಿಕ ಸ್ನೇಹಿತನೊಂದಿಗೆ ತೆರಳಿದನು. ಅಕ್ಟೋಬರ್ 25 ರಂದು ಶರೋನ್ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು.
ಆದರೆ ಗ್ರೀಷ್ಮಾಳೇ ಶರೋನ್ ರಾಜ್ ಸಾವಿಗೆ ಕಾರಣವೆಂದು ಬಲವಾಗಿ ನಂಬಿದ್ದ ಆತನ ಸಹೋದರ ಪೊಲೀಸರ ಮೇಲೆ ಒತ್ತಡ ತಂದಿದ್ದು, ಕೊನೆಗೆ ಅಕ್ಟೋಬರ್ 31ರಂದು ಆಕೆಯನ್ನು ಠಾಣೆಗೆ ಕರೆಸಿಕೊಂಡು ಎಂಟು ಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ತಾನು ಕೊಲೆ ಮಾಡಿರುವ ಸಂಗತಿಯನ್ನು ಒಪ್ಪಿಕೊಂಡಿದ್ದಾಳೆ.