- Advertisement -
- Advertisement -
ಬೆಳಗಾವಿ : ಮುರಗೋಡ ಶಾಖೆಯ ಬೆಳಗಾವಿ ಡಿಸಿಸಿ ಬ್ಯಾಂಕ್ ನಿಂದ ಖದೀಮರು ಚಿನ್ನ ಸೇರಿದಂತೆ ಆರು ಕೋಟಿ ಮೌಲ್ಯದ ವಸ್ತುಗಳನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ಬೀಗ ಮುರಿದು ಈ ಕೃತ್ಯ ಎಸಗಿದ್ದಾರೆ.
ಕಳ್ಳರು ಬ್ಯಾಂಕ್ ನಲ್ಲಿದ್ದ 4 ಕೋಟಿ 41 ಲಕ್ಷ ರೂಪಾಯಿ ನಗದು , 1.5 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಶ್ವಾನ ದಳ , ಬೆರಳಚ್ಚು ತಜ್ಞರು ಹಾಗೂ ಮುರಗೋಡ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -