Friday, April 19, 2024
spot_imgspot_img
spot_imgspot_img

ಡೆಲಿವರಿ ವೇಳೆ ಹೊಟ್ಟೆಯಲ್ಲಿಯೇ ಟವಲ್‌ ಬಿಟ್ಟು ನಿರ್ಲಕ್ಷ್ಯ ಮೆರೆದ ವೈದ್ಯರು!

- Advertisement -G L Acharya panikkar
- Advertisement -

ಉತ್ತರ ಪ್ರದೇಶ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರಿಗೆ ಸಿಜರಿಯನ್‌ ಡೆಲಿವರಿ ಮಾಡುವ ವೇಳೆ ಹೊಟ್ಟೆಯಲ್ಲಿಯೇ ಟವಲ್‌ ಬಿಟ್ಟು ಶಸ್ತ್ರಚಿಕಿತ್ಸೆ ನಡೆಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಹಜಾರಾನಪುರದಲ್ಲಿ ನಡೆದಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಮಹಿಳೆ ನೀಲಂ(30). ಈ ಘಟನೆಯಲ್ಲಿ ಮಹಿಳೆ ನೀಲಂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಸಂದರ್ಭದಲ್ಲಿ ಬಟ್ಟೆಯನ್ನು ಹೊಟ್ಟೆಯಲ್ಲಿಯೇ ಉಳಿಸಲಾಗಿದೆ ಎಂದಿದ್ದಾರೆ.

ಮಹಿಳೆಗೆ ದಿನದಿಂದ ದಿನಕ್ಕೆ ಹೊಟ್ಟೆ ನೋವು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿದಾಗ ವಿಷಯ ಬಹಿರಂಗಗೊಂಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ಮಾಡಿದ ಈ ಎಡವಟ್ಟಿನಿಂದ ಮಹಿಳೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಆಕೆಯ ಹೊಟ್ಟೆಯಿಂದ ಬಟ್ಟೆಯನ್ನು ತೆಗೆಯಲಾಗಿದೆ. ಆದರೆ ಪರಿಸ್ಥಿತಿ ಗಂಭೀರವಾಗಿದೆ. ನಗರದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನ ಆಘಾತ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ ನೀಲಂ ಅವರ ಪತಿ ಮನೋಜ್ ಅವರು ತಿಲ್ಹಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -

Related news

error: Content is protected !!