Thursday, April 25, 2024
spot_imgspot_img
spot_imgspot_img

ಡೇಟಿಂಗ್​ ಆ್ಯಪ್‌ನಲ್ಲಿ ಮಾಯಾಂಗನೆಯ ಬಲೆಗೆ ಬಿದ್ದು ಕೋಟ್ಯಂತರ ರೂಪಾಯಿ ಕಳೆದುಕೊಂಡ ಬ್ಯಾಂಕ್ ಮ್ಯಾನೇಜರ್

- Advertisement -G L Acharya panikkar
- Advertisement -

ಬೆಂಗಳೂರು: ಡೇಟಿಂಗ್​ ಆ್ಯಪ್‌ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್​ ಮ್ಯಾನೇಜರ್ ನ ಬಣ್ಣ ಬಯಲಾಗಿದ್ದು, ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ.

ಸಿಲಿಕಾನ್​ ಸಿಟಿಯ ಹನುಮಂತನಗರದ ಇಂಡಿಯನ್​ ಬ್ಯಾಂಕ್​ ವ್ಯವಸ್ಥಾಪಕ ಎಸ್​. ಹರಿಶಂಕರ್​ ಬಂಧಿತ. ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟ ಹರಿಶಂಕರ್​, ‘ಡೇಟಿಂಗ್​ ಆಯಪ್​ನಲ್ಲಿ ನನಗೆ ಯುವತಿ ಪರಿಚಯ ಆದಳು. ಅವಳ ಮೋಹಕ ಮಾತುಗಳಿಗೆ ಮರುಳಾಗಿ ಆಕೆಯ ಬಲೆಯಲ್ಲಿ ಸೆರೆಯಾದೆ. ಆಕೆ ಕೇಳಿದಾಗಲೆಲ್ಲಾ, ಆಕೆ ಹೇಳಿದ ಬ್ಯಾಂಕ್​ ಖಾತೆಗಳಿಗೆ ಗ್ರಾಹಕರ ಹೆಸರಿನಲ್ಲಿ ಸಾಲದ ದಾಖಲೆ ಸೃಷ್ಟಿಸಿ ಬ್ಯಾಂಕ್​ ಖಾತೆಗೆ ವರ್ಗಾವಣೆ ಮಾಡಿಕೊಂಡು ಡೇಟಿಂಗ್​ ಯುವತಿಗೆ ಕಳಿಸಿಬಿಟ್ಟೆ. ಅವಳ ಪ್ರೇಮಪಾಶಕ್ಕೆ ಒಳಗಾಗಿ ಮಾಡಬಾರದ್ದು ಮಾಡಿಬಿಟ್ಟೆ. ಬರೋಬ್ಬರಿ 5.70 ಕೋಟಿ ರೂ. ಕೊಟ್ಟು ಕೈ ಸುಟ್ಟುಕೊಂಡೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಹನುಮಂತನಗರ ಇಂಡಿಯನ್​ ಬ್ಯಾಂಕ್​ನಲ್ಲಿ ಅನಿತಾ ಎಂಬುವರು 1.32 ಕೋಟಿ ರೂ. ಠೇವಣಿ ಇಟ್ಟಿದ್ದು ಇದರ ಆಧಾರದ ಮೇಲೆ ಕೌಶಲ್ಯ ಮತ್ತು ಮುನಿರಾಜುನನ್ನು ಬಳಸಿಕೊಂಡು ಹರಿಶಂಕರ್‍ 5.70 ಕೋಟಿ ರೂ. ಲೋನ್ ತೆಗೆದಿದ್ದಾನೆ. ಎಲ್ಲ ಓವರ್​ ಡ್ರಾಫ್ಟ್​ಗಳಿಗೂ ಅನಿತಾ ಅವರ 1.32 ಕೋಟಿ ರೂ. ಠೇವಣಿ ಹಣವನ್ನೇ ಆಧಾರವಾಗಿ ತೋರಿಸಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಣವನ್ನು ಪಶ್ಚಿಮ ಬಂಗಾಳದ 28 ಬ್ಯಾಂಕ್​ ಖಾತೆಗಳಿಗೆ ಮತ್ತು ರಾಜ್ಯ 2 ಖಾತೆ ಒಟ್ಟು 30 ಬ್ಯಾಂಕ್​ ಖಾತೆಗಳಿಗೆ ಕೇವಲ 6 ದಿನಗಳ ನಡುವೆ 136 ಬಾರಿ ವರ್ಗಾವಣೆ ಮಾಡಿದ್ದಾರೆ. ಈ ವಿಷಯ ಮೇಲಧಿಕಾರಿಗಳ ಗಮನಕ್ಕೆ ಬಂದು ಪ್ರಶ್ನಿಸಿದ್ದಾರೆ. ಆನಂತರ ಆಂತರಿಕ ತನಿಖೆ ನಡೆಸಿದಾಗ ಗ್ರಾಹಕರ ಹೆಸರಿನಲ್ಲಿ ಸಾಲ ಪಡೆದಿರುವುದು ಗೊತ್ತಾಗಿದೆ.

5.70 ಕೋಟಿ ರೂ. ದುರುಪಯೋಗ ಆರೋಪದ ಮೇಲೆ ಇಂಡಿಯನ್​ ಬ್ಯಾಂಕ್​ನ ಪ್ರಾದೇಶಿಕ ವ್ಯವಸ್ಥಾಪಕ ಡಿ.ಎಸ್​. ಮೂರ್ತಿ ದೂರು ನೀಡಿದ್ದರು. ಇದರ ಆಧಾರದ ಮೇಲೆ ವ್ಯವಸ್ಥಾಪಕ ಹರಿಶಂಕರ್​, ಸಹಾಯಕ ವ್ಯವಸ್ಥಾಪಕಿ ಕೌಶಲ್ಯ ​ ಮತ್ತು ಕ್ಲರ್ಕ್​ ಮುನಿರಾಜು ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಹರಿಶಂಕರ್​ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ 10 ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ.

- Advertisement -

Related news

error: Content is protected !!