- Advertisement -
- Advertisement -
ಡ್ಯೂಟಿಗೆ ಸ್ವಲ್ಪ ತಡವಾಗಿ ಬರುವುದಾಗಿ ಹೇಳಿ ಯುವಕ ತನ್ನ ಮನೆಯ ಮೇಲ್ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ಹನುಮಾನ್ ನಗರದಲ್ಲಿ ನಡೆದಿದೆ. ಈಶ್ವರ ಮಂಜುನಾಥ ನಾಯ್ಕ (24) ಸಾವನ್ನಪ್ಪಿದ ಯುವಕ ಎಂದು ಗುರುತ್ತಿಸಲಾಗಿದೆ.
ಈಶ್ವರ ಮಂಜುನಾಥ ನಾಯ್ಕ ಹನುಮಂತನಗರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಹೋದ್ಯೋಗಿಯೊಂದಿಗೆ ಫೋನ್ನಲ್ಲಿ ಮಾತನಾಡಿ ಇಂದು ಡ್ಯೂಟಿಗೆ ಸ್ವಲ್ಪ ತಡವಾಗಿ ಬರುವುದಾಗಿ ತಿಳಿಸಿದ್ದಾನೆ. ಆದರೆ ಸಹೋದ್ಯೋಗಿ ಕೆಲ ಗಂಟೆಗಳ ಕಾಲ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬರದಿರಲ್ಲಿಲ್ಲ. ಈ ಘಟನೆ ಮನೆಯಲ್ಲಿ ಯಾರೂ ಇರದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಎ.ಎಸ್.ಐ ಗೋಪಾಲ್ ನಾಯಕ ತನಿಖೆ ನಡೆಸುತ್ತಿದ್ದಾರೆ.
- Advertisement -