Sunday, June 29, 2025
spot_imgspot_img
spot_imgspot_img

ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಹತ್ಯೆ

- Advertisement -
- Advertisement -
astr

ಚಿಕ್ಕಬಳ್ಳಾಪುರ: ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನಿಗೆ ರಾತ್ರಿ ಕಂಠಪೂರ್ತಿ ಕುಡಿಸಿ, ಬಳಿಕ ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 44ರ ಹಾರೋಬಂಡೆ ಬಳಿಯ ಬೆಟ್ಟದಲ್ಲಿ, ದೊಡ್ಡಬಳ್ಳಾಪುರ ಮೂಲದ ನಂದನ್ ಎಂಬ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ನಂದನ್ ಚಿಕ್ಕಬಳ್ಳಾಪುರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈತ ದರ್ಶನ್ ತಂಗಿಯನ್ನು ಪ್ರೀತಿಸುತ್ತಿದ್ದ. ಆದರೆ ದರ್ಶನ್, ತಂಗಿಯ ತಂಟೆಗೆ ಬಾರದಂತೆ ಹಲವು ಸಲ ನಂದನ್‌ಗೆ ಎಚ್ಚರಿಕೆ ಕೂಡ ಕೊಟ್ಟಿದ್ದನಂತೆ. ಬಳಿಕ ನಂದನ್ ಕೊಲೆಗೆ ದರ್ಶನ್ ಹಾಗೂ ಆತನ ಸ್ನೇಹಿತ ಆಶ್ರಯ್ ಸೇರಿ ಸ್ಕೆಚ್ ಹಾಕಿದ್ದಾರೆ. ಮದ್ಯ ಸೇವನೆ ನೆಪದಲ್ಲಿ ನಂದನ್​ನನ್ನು ದರ್ಶನ್ ಹಾರೋಬಂಡೆಗೆ ಕರೆದುಕೊಂಡು ಹೋಗಿದ್ದಾನೆ.

ನಂತರ ನಂದನ್‌ಗೆ ಕಂಠಪೂರ್ತಿ ಕುಡಿಸಿ ಬಳಿಕ ಮಾರಕಾಸ್ತ್ರಗಳಿಂದ 40ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು, ಆರೋಪಿ ದರ್ಶನ್​​​ ಹಾಗೂ ಆಶ್ರಯ್‌ನನ್ನು ಬಂಧಿಸಿದ್ದಾರೆ.

vtv vitla
- Advertisement -

Related news

error: Content is protected !!