Friday, May 17, 2024
spot_imgspot_img
spot_imgspot_img

ತಂದೆಯ ತಿಥಿ ಕಾರ್ಯದ ದಿನದಂದೇ ಮಗಳು ದಾರುಣ ಸಾವು..!

- Advertisement -G L Acharya panikkar
- Advertisement -

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನ ಕಲಕುವ ಘಟನೆಯೊಂದು ನಡೆದಿದೆ. ತಂದೆಯ ತಿಥಿ ಕಾರ್ಯದ ದಿನವೇ ಮಗಳ ದಾರುಣ ಸಾವಾಗಿದೆ. ತಿಥಿ ಕಾರ್ಯಕ್ಕೆಂದು ಅಡುಗೆ ಮಾಡುವಾಗ ಗ್ಯಾಸ್ ಸೋರಿಕೆಯಾಗಿ ಅನಾಹುತ ಸಂಭವಿಸಿದ್ದು ಪರಮೇಶ್ವರಿ(42) ಮೃತಪಟ್ಟಿದ್ದಾರೆ.ನಗರದ ಕೆಎಸ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಮನೆಯೊಂದರಲ್ಲಿ ತಿಥಿ ಕಾರ್ಯಕ್ಕೆಂದು ಸಿದ್ಧತೆ ನಡೆದಿತ್ತು.

ಮನೆ ಚಿಕ್ಕದಿದ್ದ ಕಾರಣ ಕೋಣೆಯೊಂದರಲ್ಲಿ ಸ್ಟವ್ ಇಟ್ಟು ಅಡುಗೆ ಮಾಡಲು ಮೃತರ ಕುಟುಂಬಸ್ಥರು ತಯಾರಿ ನಡೆಸಿದ್ದರು. ತಿಥಿ ಕಾರ್ಯಕ್ಕೆ ನಾನ್ ವೆಜ್ ಅಡುಗೆ ಮಾಡಲು ಕುಟುಂಬಸ್ಥರು‌ ಸಿಲಿಂಡರ್ ತರಿಸಿದ್ದರು. ಇದೇ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿಯ ತೀವ್ರತೆಗೆ ಗ್ಯಾಸ್ ಫ್ಲೇಮ್ ದೊಡ್ಡದಾಗಿ ಹೊತ್ತಿಕೊಂಡಿದೆ. ಈ ಪರಿಣಾಮ ಅಡುಗೆ ಮಾಡ್ತಿದ್ದ ಮೃತನ ಮಗಳು ಪರಮೇಶ್ವರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಆರು ಮಂದಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!