Monday, April 29, 2024
spot_imgspot_img
spot_imgspot_img

ತಂದೆ ಜೊತೆ ಸೇರಿ ಪತ್ನಿಯನ್ನೇ ಕೊಲೆಗೈದ ಪತಿ

- Advertisement -G L Acharya panikkar
- Advertisement -

ನೆಲಮಂಗಲ: ಅಪ್ಪನ ಜೋತೆ ಪತಿ ಸೇರಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆಯಲ್ಲಿ ನಡೆದಿದೆ. ರೇಖಾ (30) ಮೃತ ದುರ್ದೈವಿ. ರೇಖಾ ಮಾವ ನಾರಯಣಪ್ಪ ಮತ್ತು ಪತಿ ಗಿರೀಶ್​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರಿನ ದಿಬ್ಬೂರು ಮೂಲದ ಮೃತ ರೇಖಾ 12 ವರ್ಷದ ಹಿಂದೆ ಗಿರೀಶ್ ಜೊತೆ ಮದುವೆಯಾಗಿತ್ತು.

vtv vitla
vtv vitla

ಕಳೆದ ಎರಡು ವರ್ಷಗಳಿಂದ ಹಣಕ್ಕಾಗಿ ದಿನನಿತ್ಯ ಕಿರುಕುಳ ಕೊಡುತ್ತಿದ್ದ ಅರೋಪ ಕೇಳಿಬಂದಿದೆ. ರೇಖಾ ಕೊಲೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದರು. ಪೋಷಕರು ಮನೆ ಬಳಿ ಬರುವಷ್ಟರಲ್ಲಿ ಕೊಲೆ ನಡೆದುಹೋಗಿದೆ. ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಸರ್ಕಾರಿ ಅಸ್ಪತ್ರೆಗೆ ಮೃತ ದೇಹವನ್ನು ರವಾನೆ ಮಾಡಲಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!