- Advertisement -
- Advertisement -
ಯುವಕನೊಬ್ಬನನ್ನು ಹಿಂಬಾಲಿಕೊಂಡು ಬಂದ ಮೂವರು ದುಷ್ಕರ್ಮಿಗಳು ತಡರಾತ್ರಿ ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಶಿವಬಸವನಗರದಲ್ಲಿ ಹೋಗುತ್ತಿದ್ದ ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಎಂಬಾತನನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡ ಬಂದ ಮೂವರು ದುಷ್ಕರ್ಮಿಗಳು ಅಡ್ಡಹಾಕಿ ಕಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಘಟನೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶ್ವಾನದಳ, ಬೆರಳಚ್ಚು ತಜ್ಞರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ.
- Advertisement -