Thursday, April 18, 2024
spot_imgspot_img
spot_imgspot_img

ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಶಂಕರಪ್ಪ ಆತ್ಮಹತ್ಯೆ.!!

- Advertisement -G L Acharya panikkar
- Advertisement -

ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಚೌಡನಕುಪ್ಪೆ ಗ್ರಾಮ ಸಮೀಪದ ಅಕ್ಕಿಮರಿಪಾಳ್ಯದ ಶಂಕರಪ್ಪ(45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಣಿಗಲ್​ ತಾಲೂಕಿನ ಚೌಡನಕುಪ್ಪೆ ಗ್ರಾಮದ ಹೊಲವೊಂದರಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021ರ ಅಕ್ಟೋಬರ್​ನಲ್ಲಿ ಸಂತೆಮಾವತ್ತೂರು ಗ್ರಾಮದ ಮೇಘನಾ ಮತ್ತು ಅಕ್ಕಿಮರಿಪಾಳ್ಯದ ಶಂಕರಪ್ಪ ಅವರ ಮದುವೆ ನಡೆದಿದ್ದು, ಅವರಿಬ್ಬರು ಸಂತೋಷದಿಂದ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

ಇನ್ನು 45 ವರ್ಷ ವಯಸ್ಸಾದರೂ ಶಂಕರಪ್ಪಗೆ ಮದುವೆ ಆಗದ ಹಿನ್ನಲೆಯಲ್ಲಿ ಮೇಘನಾ ಅವರೇ ಹೋಗಿ ತನ್ನನ್ನು ಮದುವೆ ಆಗುವಂತೆ ಪ್ರಸ್ತಾಪ ಇಟ್ಟಿದ್ದರು. ಇದಕ್ಕೆ ಒಪ್ಪಿದ್ದ ಶಂಕರಣ್ಣ ಗ್ರಾಮ ಸಮೀಪದ ದೇವಾಲಯದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ​ವೈರಲ್​ ಆಗಿತ್ತು.

ಮನೆಯಿಂದ ಹೊಲದ ಕಡೆ ಹೋಗೋದಾಗಿ ಹೇಳಿದ್ದ ಶಂಕರಪ್ಪ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದು, ಸ್ಥಳದಲ್ಲಿ ಡೆತ್​ನೋಟ್ ಪತ್ತೆಯಾಗಿದೆ. ಈ ಬಗ್ಗೆ ಹುಲಿಯೂರುದುರ್ಗ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!