Monday, April 29, 2024
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಕಲಬುರಗಿ: ನಗರದ ಹಾಗರಗಾ ರಸ್ತೆಯಲ್ಲಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮುಜತ್ ಸುಲ್ತಾನ್ (35) ಹತ್ಯೆಯಾದವರು. ಅಜೀಮ್ ಶೇಖ್, ವಸೀಂ ಶೇಖ್, ನಯಿಮ್, ನದೀಮ್ ಹತ್ಯೆ ಮಾಡಿದ ಹಂತಕರಾಗಿದ್ದಾರೆ.

ಕಲಬುರಗಿ ನಗರದ ಜಂಜಂ ಕಾಲೋನಿ ನಿವಾಸಿಯಾಗಿರುವ ಮುಜತ್ ಸುಲ್ತಾನ್ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು. ಮುಜತ್‌ ಸುಲ್ತಾನ್‌ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಂತಕರು ಮೊದಲು ಕಾರಿನಿಂದ ಗುದ್ದಿ ಕೆಳಗೆ ಬೀಳಿಸಿದ್ದಾರೆ. ಕೆಳಗೆ ಬಿದ್ದವಳು ಮೇಲೆ ಏಳಲು ಹೋದಾಗ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹತ್ಯೆ ಕಾರಣ ಏನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

- Advertisement -

Related news

error: Content is protected !!