Friday, April 19, 2024
spot_imgspot_img
spot_imgspot_img

ತುಂಬೆ: ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತ; ಹಲವರಿಗೆ ಗಾಯ..!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಮಂಗಳೂರು: ತುಂಬೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಉರುಳಿಬಿದ್ದ ಘಟನೆ ಫೆ. 14ರ ಸೋಮವಾರ ರಾತ್ರಿ ನಡೆದಿದೆ. ಅಪಘಾತದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತುಂಬೆ ಬಳಿಯ ಬಿಎ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಸೀ ಬರ್ಡ್ ಅಪಘಾತದ ನಂತರ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದು ನಂತರ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಪಘಾತದ ಪರಿಣಾಮ ಬಸ್ ಟ್ಯಾಂಕ್‌ನಿಂದ ಡೀಸೆಲ್ ಸೋರಿಕೆಯಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ನೀರು ಸಿಂಪಡಿಸಿ, ಅಪಘಾತದಿಂದ ಹೆಚ್ಚಿನ ಹಾನಿಯಾಗದಂತೆ ಕ್ರಮಕೈಗೊಂಡಿದ್ದಾರೆ.

- Advertisement -

Related news

error: Content is protected !!