Thursday, April 25, 2024
spot_imgspot_img
spot_imgspot_img

ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಲ್ಲು ತೂರಾಟ:ಮೂವರಿಗೆ ಗಾಯ

- Advertisement -G L Acharya panikkar
- Advertisement -

ಚಿಕ್ಕಮಗಳೂರಿನ ದತ್ತಪೀಠಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

 ದತ್ತ ಮಾಲಾಧಾರಿಗಳು ಚಿಕ್ಕಮಗಳೂರಿನ ಬಾಬಾಬುಡ್ಡನಗಿರಿಯ ದತ್ತಪೀಠಕ್ಕೆ ಹೊರಟಿದ್ದರು. ಈ ವೇಳೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ (ನವೆಂಬರ್ 13) ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕೋಲಾರದ ಶ್ರೀರಾಮ ಸೇನೆ ಕಾರ್ಯಕರ್ತರು ದತ್ತಮಾಲೆ ಧರಿಸಿ ದತ್ತಪೀಠಕ್ಕೆ ಒಂದು ಮಿನಿ ಬಸ್​ನಲ್ಲಿ ಹೊರಟಿದ್ದರು. ಬಸ್​ನಲ್ಲಿ ಜೈ ಶ್ರೀರಾಮ್ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿಕೊಂಡು ಹೋಗುತ್ತಿದ್ದರು. ಈ ವೇಳೆ ಕೋಲಾರದ ಕ್ಲಾಕ್ ಟವರ್ ಬಳಿಯ ವಿಶಾಲ್ ಮಾರ್ಟ್ ಎದುರು ಏಕಾಏಕಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಈ ವೇಳೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದತ್ತ ಮಾಲಾಧಾರಿಗಳಿದ್ದ ಬಸ್ ಅಲ್ಲಿಂದ ತಕ್ಷಣ ಹೊರಟಿತ್ತು. ಆದರೂ ಬಸ್​ನಲ್ಲಿದ್ದ ಮೂವರಿಗೆ ಗಾಯಗಳಾಗಿದೆ. ಇನ್ನು ವಿಷಯ ತಿಳಿದ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರಾದರೂ. ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ದತ್ತ ಮಾಲಾಧಾರಿಗಳು ಕೋಲಾರ ನಗರ ಠಾಣೆ ಎದುರು ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದರು.ಅಲ್ಲದೆ ಇಡೀ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಆರೋಪಿಗಳನ್ನು ಬಂಧಿಸುವ ಭರವಸೆ ಕೊಟ್ಟನಂತರ ಪ್ರತಿಭಟನೆ ಕೈಬಿಟ್ಟ ಪ್ರತಿಭಟನಾಕಾರರು ಬೇರೊಂದು ವಾಹನದಲ್ಲಿ ಹೊರಟರು. ಎಸ್​ಪಿ ಕಿಶೋರ್​ ಬಾಬು ಹಾಗೂ ಜಿಲ್ಲಾಧಿಕಾರಿ ಸೆಲ್ವಮಣಿ ನಗರದಲ್ಲಿ ರೌಂಡ್ಸ್ ಮಾಡಿ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕೋಲಾರ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

- Advertisement -

Related news

error: Content is protected !!