Tuesday, May 7, 2024
spot_imgspot_img
spot_imgspot_img

ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ; ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ದತ್ತಜಯಂತಿಗೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ ತಲೆಮರೆಸಿಕೊಂಡಿದ್ದ ಓರ್ವ ಆರೋಪಿ ನೇರವಾಗಿ ಕೋರ್ಟಿಗೆ ಹಾಜರಾಗಿದ್ದಾನೆ.

ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿ ಆಜಂ ಪಾಷಾ. ನ್ಯಾಯಾಲಕ್ಕೆ ಶರಣಾದ ಆರೋಪಿ. ಡಿಸೆಂಬರ್ 6-7-8 ರಂದು ನಡೆದಿದ್ದ ದತ್ತಜಯಂತಿ ಕಾರ್ಯಕ್ರಮದಲ್ಲಿ ಮೊದಲ ದಿನ ಮಹಿಳೆಯರು ಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದರು. ಪರಿಣಾಮ ಪೊಲೀಸ್ ಸೇರಿದಂತೆ ನಾಲ್ಕೈದು ಗಾಡಿಗಳು ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದವು. ಈ ಪ್ರಕರಣದಲ್ಲಿ ಪೊಲೀಸರು ಮಹಮದ್ ಶಹಬಾಸ್, ವಾಹೀದ್ ಹುಸೇನ್ ಎಂಬ ಇಬ್ಬರನ್ನು ಬಂಧಿಸಿದ್ದರು. ಓರ್ವ ಆರೋಪಿ ತಲೆಮರೆಸಿಕೊಂಡಿದ್ದ.

ತಲೆಮರೆಸಿಕೊಂಡಿದ್ದ ಕೋರ್ಟಿಗೆ ಶರಣಾಗಿದ್ದಾನೆ. ಇದುವರೆಗೆ ಒಟ್ಟು ಮೂವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳು ಹಾರ್ಡ್‍ವೇರ್ ಶಾಪ್‍ನಲ್ಲಿ 4 ಕೆ.ಜಿ. ಮೊಳೆಗಳನ್ನು ಖರೀದಿಸಿದ್ದರು.

- Advertisement -

Related news

error: Content is protected !!