- Advertisement -
- Advertisement -
ಚಿಕ್ಕಮಗಳೂರು: ರಾತ್ರಿ ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ದನಗಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಕಳೆದ ರಾತ್ರಿ ದನ ಕಳ್ಳತನ ಘಟನೆಯೊಂದು ಬೆಳಕಿಗೆ ಬಂದಿದೆ. ಹುಲ್ಮಕ್ಕಿ ಸ್ವದೇಶಿ ಭಂಡಾರ ಅಂಗಡಿ ಮುಂಭಾಗದಿ0ದ ದನ ಕಳ್ಳತನ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅಪರಿಚಿತ ಕಾರೊಂದು ಬಂದು ಮಲಗಿರುವ ದನಗಳನ್ನು ಕಾರಿಗೆ ತುಂಬಿಸಿಕೊಂಡು ಕದ್ಯೊಯ್ದಿದ್ದಾರೆ. ಖತರ್ನಾಕ್ ಗೋವು ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -