Thursday, May 2, 2024
spot_imgspot_img
spot_imgspot_img

ದಯಾ ಕ್ರಿಯೇಷನ್ ಬಾಯಾರು ಇದರ 2ನೇ ವರ್ಷದ ಸಂಭ್ರಮಾಚರಣೆ “ದಯಾ ಮೆಲೋಡೀಸ್ ಮ್ಯೂಸಿಕಲ್ ೨೦೨೩” ಕಾರ್ಯಕ್ರಮ

- Advertisement -G L Acharya panikkar
- Advertisement -
vtv vitla

ದಯಾ ಕ್ರಿಯೇಷನ್ ಬಾಯಾರು ಇದರ 2ನೇ ವರ್ಷ ದ ಸಂಭ್ರಮಾಚರಣೆ “ದಯಾ ಮೆಲೋಡೀಸ್ ಮ್ಯೂಸಿಕಲ್ 2023” ಕಾರ್ಯಕ್ರಮ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು.

ಬೆಳಿಗ್ಗೆ ಸತ್ಯನಾರಾಯಣ ಪೂಜೆ ಮತ್ತು ಶ್ರೀದೇವಿಗೆ ಪೂಜೆ ಬಳಿಕ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ವನಿತಾ ತಾರಿದಾಳ ಅಧ್ಯಕ್ಷರು ಗ್ರಾಮ ಪಂಚಾಯತ್ ಮಾಣಿಲ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕುಕ್ಕಾಜೆ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರಿ ಶ್ರಿಕೃಷ್ಣ ಗುರೂಜಿ ದೀಪ ಬೆಳಗಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ತುಳು ಕವಿ ಸಾಹಿತಿ ವಾಗ್ಮಿ ವಿಮರ್ಷಕ ತುಳು ಸಾಹಿತ್ಯ ರತ್ನ,ಜೋಗಿ ಸಾಹಿತ್ಯ ಶ್ರೀ ಪ್ರಶಸ್ತಿ ಪುರಸ್ಕೃತ ಕೆ.ಮಹೇಂದ್ರ ನಾಥ್ ಸಾಲೆತ್ತೂರು, ಅಮಂತ್ರಣ ಪರಿವಾರ ವಿಜಯ ಕುಮಾರ್ ಜೈನ್ ಅಳದಂಗಡಿ, ನಮ್ಮ ಕುಡ್ಲ ವಾಹಿನಿಯ ವಾರ್ತಾ ವಾಚಕಿ ಡಾ. ಪ್ರಿಯಾ ಹರೀಶ್, ಕಾಂತಾರ ಖ್ಯಾತಿಯ ಪುಷ್ಪರಾಜ್ ಬೊಳ್ಳಾರ್, ಶ್ರೀಧರ್ ಬಾಳೆಕಲ್ಲು ಕಾರ್ಯದರ್ಶಿ ಜೀರ್ಣೋದ್ಧಾರ ಸಮೀತಿ ಶ್ರೀ ಕ್ಷೇತ್ರ ಕುಕ್ಕಾಜೆ, ರೀತೇಶ್ ಅಂಚನ್, ಕೃಷ್ಣಪ್ಪ ಪೂಜಾರಿ ಪೂಜಾರಿ ತಾರಿದಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಟಿವಿ ವಾಹಿನಿಯ ವೀಡಿಯೋ ಜರ್ನಲಿಸ್ಟ್ ಕೆ ವಿಲ್ಪ್ರೆಂಡ್‌ ಡಿ’ಸೋಜರವರನ್ನು ಅಭಿನಂದಿಸಿ ಗೌರವಿಸಲಾಯಿತು. ಹಾಗೂ ದಯಾ ಕ್ರಿಯೇಷನ್ ತಂಡದ ಕಲಾವಿದರನ್ನು ಗುರುತಿಸಿ ಗೌರವಿಸಲಾಯಿತು.

ರವಿ ಎಂ ಎಸ್ ಕುಕ್ಕಾಜೆ ಸ್ವಾಗತಿಸಿ ರೇಣುಕಾ ಕಾಣಿಯೂರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ದಯಾ ಮೆಲೋಡಿಸ್ ಮ್ಯೂಸಿಕಲ್ ತಂಡದಿಂದ ಸಾಂಸ್ಕೃತಿಕ ವೈಭವ ನಡೆಯಿತು. ಕಾರ್ಯಕ್ರಮದಲ್ಲಿ ದಯಾನಂದ ಅಮೀನ್ ಬಾಯಾರು, ದಯಾ ಕ್ರಿಯೇಷನ್ ತಂಡದ ಪದಾಧಿಕಾರಿಗಳು ಸೇರಿದಂತೆ ನೂರಾರು ಕಲಾಭಿಮಾನಿಗಳು ಭಾಗವಹಿಸಿದ್ದರು.

- Advertisement -

Related news

error: Content is protected !!