- Advertisement -
- Advertisement -
ಕಲಬುರಗಿ: ಆಳಂದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ಶಿವಲಿಂಗ ಇದೆ ಎಂದು ಸಂಘಪರಿವಾರ , ಬಿಜೆಪಿ ನಾಯಕರು, ಕಾರ್ಯಕರ್ತರ ಜೊತೆ ದರ್ಗಾ ಪ್ರವೇಶಕ್ಕೆ ಯತ್ನಿಸಿದ್ದು ಈ ವೇಳೆ ನಡೆದ ಉದ್ವಿಗ್ನತೆಗೆ ಸಂಬಂಧಿಸಿ 60 ಕ್ಕೂ ಅಧಿಕ ಮಂದಿಯ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ.
ಈ ಕುರಿತು ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿವೆ. ಘಟನೆ ಕುರಿತಂತೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಗಲಾಟೆ ಸಂದರ್ಭದಲ್ಲಿ ಕಲ್ಲು ತೂರಾಟ , ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆಗೆ ಸಂಬಂಧಿಸಿ ಈಗಾಗಲೇ 56 ಜನರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಕೂಡಾ ನಡೆಸುತ್ತಿದ್ದಾರೆ. ಇನ್ನೂ ಹಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
- Advertisement -