- Advertisement -
- Advertisement -
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯಪುರದ ಗಣಪತಿ ದೇವಾಲಯದಲ್ಲಿ ಸರಳವಾಗಿ ಚೈತ್ರಾಕೊಟ್ಟೂರು, ನಾಗರ್ಜುನ್ ಜೊತೆ ಸಪ್ತಪದಿ ತುಳಿದಿದ್ದಾರೆ.
ಹಲವು ವರ್ಷಗಳಿಂದ ಚೈತ್ರಾ ಹಾಗೂ ನಾಗರ್ಜುನ್ ಇಬ್ಬರು ಪ್ರೀತಿಸುತ್ತಿದ್ದು, ಇದೀಗ ಸದ್ದಿಲ್ಲದೇ ಸೈಲೆಂಟ್ ಆಗಿ ವಿವಾಹವಾಗುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.
ಇತ್ತೀಚೆಗಷ್ಟೇ ಚೈತ್ರಾಕೊಟ್ಟೂರು ಹುಡುಗರು ತುಂಬಾ ಒಳ್ಳೆಯವರು ಎಂಬ ಹಾಡೊಂದನ್ನು ಬಿಡುಗಡೆಗೊಳಿಸಿದ್ದರು. ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅಲ್ಲದೆ ಖಾಸಗಿ ವಾಹಿನಿಯೊಂದರ ಸಿರಿಯಲ್ನಲ್ಲಿ ಚೈತ್ರಾ ಕೊಟ್ಟೂರು ಅಭಿನಯಿಸಿದ್ದರು.
ಈ ಹಿಂದೆ ಬಿಗ್ಬಾಸ್ ಸೀಸನ್-7ರ ಅವಧಿಯಲ್ಲಿ ಒಂದು ಬಾರೀ ಎಲಿಮಿನೆಟ್ ಆಗಿ ಮತ್ತೊಂದು ಬಾರಿ ವೈಲ್ಡ್ ಕಾರ್ಡ್ ಮೂಲಕ ಬಿಗ್ಮನೆಗೆ ಎಂಟ್ರಿ ನೀಡಿದ್ದರು.
- Advertisement -