Sunday, August 2, 2026
spot_imgspot_img
spot_imgspot_img

ದೆವ್ವಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ಪೊಲೀಸ್!

- Advertisement -
- Advertisement -

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಲಕುರಿಚಿ ಜಿಲ್ಲೆಯ ಪೆರುಂಬಕ್ಕಂ ಪ್ರದೇಶದ ಪ್ರಭಾಕರನ್ (33) ಪೊಲೀಸ್ ತಮ್ಮ ಪೊಲೀಸ್ ಕ್ವಾರ್ಟರ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕಡಲೂರು ಸಶಸ್ತ್ರ ಪೊಲೀಸ್‌ನಲ್ಲಿ ಮೊದಲ ಕಾನ್‌ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರಭಾಕರನ್ ವಿಷ್ಣುಪ್ರಿಯಾ ಅವರನ್ನು ಮದುವೆಯಾಗಿದ್ದರು. ಅವರಿಗೆ ಒಬ್ಬ ಮಗ ಮತ್ತು ಮಗಳಿದ್ದರು. ಕಡಲೂರಿನ ಸಶಸ್ತ್ರ ಪೊಲೀಸ್ ಠಾಣೆಯ ಕ್ವಾರ್ಟರ್ಸ್​ನಲ್ಲಿ ಅವರ ಕುಟುಂಬ ವಾಸವಾಗಿತ್ತು. ಪ್ರಭಾಕರನ್ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಇತ್ತೀಚೆಗೆ, ಪ್ರಭಾಕರನ್ ಅವರ ಕನಸಿನಲ್ಲಿ ಬೆಂಕಿಯಲ್ಲಿ ಸುಟ್ಟುಹೋದ ಮಹಿಳೆಯೊಬ್ಬರು ಬಂದು ಕತ್ತು ಹಿಸುಕಲು ಪ್ರಯತ್ನಿಸಿದ್ದಳು. ಈ ಬಗ್ಗೆ ಅವರು ತಮ್ಮ ಸ್ನೇಹಿತರು ಹಾಗೂ ಮನೆಯವರ ಬಳಿ ಹೇಳಿಕೊಂಡಿದ್ದರು. ಯಾಕೆ ತನಗೆ ಹೀಗೆ ಕನಸು ಬೀಳುತ್ತಿದೆ ಎಂಬ ಬಗ್ಗೆ ಪ್ರಭಾಕರನ್ ಜ್ಯೋತಿಷಿಯನ್ನು ಸಂಪರ್ಕಿಸಿದ್ದರು. ಅವರು ಇದು ಪ್ರೇತ ಅಥವಾ ಆತ್ಮದ ಕಾಟವಿರಬಹುದು ಎಂದಿದ್ದರು. ಹೀಗಾಗಿ, 15 ದಿನಗಳ ಕಾಲ ಅನಾರೋಗ್ಯದ ರಜೆ ಪಡೆದಿದ್ದ ಪ್ರಭಾಕರನ್ ತನ್ನ ಪೊಲೀಸ್​ ಕ್ವಾರ್ಟರ್ಸ್​ನ ಪೂಜಾ ಕೊಠಡಿಯಲ್ಲಿ ಬೀಗ ಹಾಕಿಕೊಂಡಿದ್ದರು.

ಅಲ್ಲದೆ, ತಮ್ಮ ಹೆಂಡತಿ ಮತ್ತು ಮಕ್ಕಳನ್ನು ಮೇಲ್ಪಟ್ಟಾಂಬಕ್ಕಂನಲ್ಲಿ ಸಂಬಂಧಿಕರ ಸಮಾರಂಭದಲ್ಲಿ ಭಾಗವಹಿಸಲು ಕಳುಹಿಸಿದ್ದರು. ಅವರ ಪತ್ನಿ ಮನೆಗೆ ಹಿಂತಿರುಗಿದಾಗ ಪ್ರಭಾಕರನ್ ಸೀಲಿಂಗ್‌ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು. ಕೂಡಲೇ ಅವರನ್ನು ಕೂಡ್ಲೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದರು.

ಕಡಲೂರು ಪೊಲೀಸರು ಪ್ರಭಾಕರನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇನ್ನೂ ವಿಚಿತ್ರವೆಂದರೆ, ಪ್ರಭಾಕರನ್ ಅವರ ಕನಸಿನಲ್ಲಿ ಬರುತ್ತಿದ್ದಂತೆ ಈ ಪ್ರದೇಶದಲ್ಲಿನ ಸಶಸ್ತ್ರ ಪಡೆಗಳ ಕ್ವಾರ್ಟರ್ಸ್‌ನಲ್ಲಿ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!