- Advertisement -
- Advertisement -
ಚೆನ್ನೈ : ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು ಅಗತ್ಯ ಎಂದು ನ್ಯಾಯಾಲಯ ಹೇಳಿದೆ.
ದೇವಸ್ಥಾನಗಳಿಗೆ ಆಗಮಿಸುವ ಭಕ್ತಾರಿಗೆ ತೊಂದರೆ ಆಗದಂತೆ ಮೊಬೈಲ್ ಫೋನ್ ಇರಿಸುವುದಕ್ಕಾಗಿಯೇ ವಿಶೇಷವಾಗಿ ಲಾಕರ್ ಸ್ಥಾಪಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ. ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್ಗಳನ್ನು ಸ್ಥಾಪಿಸಬೇಕು. ಈ ಆದೇಶದ ಅನುಸರಿಸಲು ಭದ್ರತಾ ಸಿಬ್ಬಂದಿಗಳನ್ನು
ನೇಮಿಸಬೇಕು ಎಂದು ಮದ್ರಾಸ್ ಉಚ್ಚ ನ್ಯಾಯಾಲಯ ಹೇಳಿದೆ.
- Advertisement -